Guruprasad: ಸಾವಿನಲ್ಲಿ ನಟ ಜಗ್ಗೇಶ್ ವಿಕೃತಿ ಮೆರೆದರಾ?: ಮನುಷ್ಯನಾ ನೀನು: ಲಾಯರ್ ಜಗದೀಶ್ ವಿಡಿಯೋ

ಬೆಂಗಳೂರು, ನವೆಂಬರ್ 04: ಕನ್ನಡ ಸಿನಿಮಾ ನಿರ್ದೇಶಕ ಮಠ ಖ್ಯಾತಿಯ ಗುರುಪ್ರಸಾದ್ ಅವರು ಆತ್ಮಹ* ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ದೊರೆತಿದೆ. ಇದಾದ ಬಳಿಕ ಒಂದಷ್ಟು ಸಿನಿಮಾ ಕಲಾವಿದರು, ಅವರೊಂದಿಗೆ ಮೊದಲು ಒಡನಾಟದಲ್ಲಿದ್ದವರು ಮಾತನಾಡಿದ್ದಾರೆ. ಗೊತ್ತಿಲ್ಲದ ವಿಷಯಗಳನ್ನು ತಿಳಿಸಿದ್ದಾರೆ. ಇದೇ ವೇಳೆ ನಟ ನವರಸನಾಯಕ ಹಾಗೂ ಬಿಜೆಪಿ ಸಂಸದ ಜಗ್ಗೇಶ್ ಅವರು ಗುರುಪ್ರಸಾದ್ ವ್ಯಕ್ತಿತ್ವ ಸೇರಿದಂತೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಅವರ ಹೇಳಿಕೆಗಳ ವಿರುದ್ಧ ಬಗ್ಗೆ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ತೀವ್ರ ಬೇಸರ ಹೊರ ಹಾಕಿದ್ದಾರೆ.

ಗುರುಪ್ರಸಾದ್ ಬಗ್ಗೆ ಹಲವು ವಿಚಾರ ಹಂಚಿಕೊಂಡಿರುವ ನಟ ಜಗ್ಗೇಶ್ ಅವರ ಕುರಿತು ಲಾಯರ್ ಜಗದೀಶ್ ಅವರು ವಿಡಿಯೋ ಮಾಡಿ ಹಾಕಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ನೆಟ್ಟಿಗರು ಜಗ್ಗೇಶ್ vs ಜಗದೀಶ್ ಎಂದು ಮಾತನಾಡುತ್ತಿದ್ದಾರೆ. ಸತ್ತ ವ್ಯಕ್ತಿಯ ಬಗ್ಗೆ ಅವರ ಸಾವಿನಲ್ಲಿ ವಿಕೃತಿ ಕಾಣಬಹುದು ಎಂಬುದನ್ನು ನಿನ್ನಿಂದ ಕಲಿಯಬೇಕು ಎಂದು ಜಗದೀಶ್ ಅವರು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು