ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ

ದಾವಣಗೆರೆಯ ಇಮಾಮ್ ನಗರದಲ್ಲಿ ನಡೆದ ಭಯಾನಕ ಘಟನೆಯಲ್ಲಿ, 40 ಲಕ್ಷ ರೂ. ವಿಮಾ ಹಣಕ್ಕಾಗಿ ದುಗ್ಗೇಶ್ ಎಂಬಾತನನ್ನು ಅವನ ಸೋದರ ಅಳಿಯ ಗಣೇಶ್​ ಮತ್ತು ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ದುಗ್ಗೇಶ್ ಅವರ ಹೆಸರಿನಲ್ಲಿ 2 ಲಕ್ಷ ರೂ. ವಿಮಾ ಪಾಲಿಸಿಯನ್ನು ಮಾಡಿಸಿ, ದುಗ್ಗೇಶ್ ಸಾಯದ ಕಾರಣ ಹತ್ಯೆ ಮಾಡಿದ್ದಾರೆ.

ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ
ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ
ದಾವಣಗೆರೆ, ನವೆಂಬರ್​ 06: ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ (death) ಮಾಡಿರುವಂತಹ ಘಟನೆ ಇಮಾಮ್ ನಗರದಲ್ಲಿ ನಡೆದಿದೆ. ಇನ್ಶೂರೆನ್ಸ್​ ಹಣಕ್ಕಾಗಿ ಸೋದರ ಅಳಿಯ ಗಣೇಶ ಮತ್ತು ಸ್ನೇಹಿತರಿಂದ ದುಗ್ಗೇಶ್ (32) ಎಂಬಾತನನ್ನು ಕೊಲೆ ಮಾಡಲಾಗಿದೆ. ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಣೇಶ (24), ಅನಿಲ(18), ಶಿವಕುಮಾರ್ (25) ಮತ್ತು ಮಾರುತಿ (24) ಬಂಧಿಸಲಾಗಿದೆ.

ಹತ್ಯೆ ನಂತರ ಲಿಂಗೇಶ್ವರ ದೇವಸ್ಥಾನ ಬಳಿ ಆರೋಪಿಗಳು ಎಸೆದು ಹೋಗಿದ್ದರು. ಮತ್ತೆ ಅನುಮಾನಗೊಂಡು ಅಪರಿಚಿತರಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ದುಗ್ಗೇಶ್ ಮೃತದೇಹವನ್ನು ಆಸ್ಪತ್ರೆಯಿಂದ ಮನೆಗೆ ತಂದು ಹೊಸ ಕತೆ ಕಟ್ಟಿದ್ದಾರೆ. ಯಾರೋ ಹೊಡೆದು ಬಿಸಾಕಿ ಹೋಗಿದ್ದರು ಎಂದಿದ್ದಾರೆ. ಆದರೆ ಅನುಮಾನಗೊಂಡ ಆಜಾದ್ ನಗರ ಠಾಣಾ ಪೊಲೀಸರು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ಗಣೇಶ್​ ಸತ್ಯ ಬಾಯ್ಬಿಟ್ಟಿದ್ದಾರೆ.

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು