ದೆಹಲಿ: ಚಲನಚಿತ್ರ ವೀಕ್ಷಿಸುತ್ತಿದ್ದಾಗಲೇ ಶ್ರೇಯಸ್ ಅಯ್ಯರ್ ಗೆ ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ದಿಢೀರ್ ಕರೆ ಮಾಡಿದ್ದು, ವಿರಾಟ್ ಕೊಹ್ಲಿ ಬದಲು ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಬೇಕೆಂದು ಸೂಚಿಸಿದ ಘಟನೆ ಬೆಳಕಿಗೆ ಬಂದಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ನಿಗದಿಪಡಿಸಿದ 249 ರನ್ಗಳ ಗುರಿಯನ್ನು ಬೆನ್ನಟ್ಟುವ ವೇಳೆ, ಭಾರತ ಆರಂಭದಲ್ಲೇ 19 ರನ್ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಅನುಭವವನ್ನು ಒರೆಗೆ ಹಚ್ಚಿ, ಕೇವಲ 36 ಎಸೆತಗಳಲ್ಲಿ 59 ರನ್ ಸಿಡಿಸಿ, ಭಾರತವನ್ನು ಗೆಲುವಿನ ಹಳಿಗೆ ಮರಳಿಸಿದರು.
ಅಯ್ಯರ್ ಅವರ ಈ ಸ್ಫೋಟಕ ಇನ್ನಿಂಗ್ಸ್ನಲ್ಲಿ 2 ಸಿಕ್ಸರ್ ಹಾಗೂ 9 ಬೌಂಡರಿಗಳು ಸೇರಿದ್ದು, ಇದುವರೆಗೆ ಅವರ ಏಕದಿನ ಕ್ರಿಕೆಟ್ ವೃತ್ತಿ ಜೀವನದ 19ನೇ ಅರ್ಧಶತಕವಾಗಿದೆ.