ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರಣ ದಂಡನೆ ಅರ್ಜಿ ತಿರಸ್ಕಾರ

ಕೋಲ್ಕತಾ: ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ದೋಷಿ ಎಂದು ಘೋಷಿಸಿದ್ದ ಸಂಜಯ್ ರಾಯ್‌ಗೆ ಮರಣ ದಂಡನೆ ವಿಧಿಸಬೇಕೆಂದು ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಆದರೆ, ಇದೇ ಮನವಿಯನ್ನು ಒಳಗೊಂಡ ಸಿಬಿಐ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದೆ.

ಈ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಜನವರಿ 20ರಂದು ಆರೋಪಿ ಸಂಜಯ್ ರಾಯ್‌ಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿದ್ದರು. ಮರಣದಂಡನೆ ನೀಡಲು ಈ ಪ್ರಕರಣವು “ಅಪರೂಪದಲ್ಲೇ ಅಪರೂಪದ” ಕೇಸಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಈ ಪ್ರಕರಣದ ಕುರಿತು ಹೈಕೋರ್ಟ್ ಮುಂದಿನ ದಿನಗಳಲ್ಲಿ ಸಿಬಿಐ ಅರ್ಜಿ ಆಧಾರದ ಮೇಲೆ ವಿಚಾರಣೆ ನಡೆಸಲಿದೆ.

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು