ಕುಡಿದ ನಶೆಯಲ್ಲಿ ಪರಸ್ಪರ ಹೊಡೆದಾಟ: ಆರು ಬಿಹಾರಿಗಳ ಪೈಕಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಭೀಕರ ಮಾರಾಮಾರಿಯಲ್ಲಿ ಬಿಹಾರ ಮೂಲದ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗಾಯಗೊಂಡಿದ್ದ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆನೇಕಲ್​, ಮಾರ್ಚ್​​ 15: ಕುಡಿದ ನಶೆಯಲ್ಲಿ ಬಿಹಾರ ಮೂಲದ ಆರು ಜನರು ಪರಸ್ಪರ ಹೊಡೆದಾಡಿಕೊಂಡಿದ್ದು, ಆ ಪೈಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಪರಾರಿ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್​ಮೆಂಟ್​ನ​ 3ನೇ ಮಹಡಿಯಲ್ಲಿ ಘಟನೆ ನಡೆದಿದೆ. ಅನ್ಸು(19), ರಾಧೆ ಶ್ಯಾಮ್(20) ಮತ್ತು ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಿಹಾರದ ಒಂದೇ ಗ್ರಾಮದ ವಾಸಿಗಳಾಗಿದ್ದರಿಂದ ಇಂದು ಬೆಳಗ್ಗೆಯಿಂದ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್​ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು